ಭಟ್ಕಳ : ಮಂಗಳೂರಿನಿಂದ ಕಾರವಾರದ ಕಡೆಗೆ ಕೆರೋಸಿನ್ ತುಂಬಿಸಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಮತ್ತು ಶಿರಸಿ ಕಡೆಯಿಂದ ಮಂಗಳೂರು ಕಡೆಗೆ ಸಕ್ಕರೆ ಮೂಟೆಗಳನ್ನು ತುಂಬಿಸಿಕೊಂಡು ಚಲಿಸುತ್ತಿರುವ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಟ್ಯಾಂಕರ್ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸುಮಾರು 9.30 ಕ್ಕೆ ಭಟ್ಕಳದ ಸಮೀಪದ ಮೂಡ್ ಭಟ್ಕಳ ಬೈಪಾಸ್ ಬಳಿ ನಡೆದಿದೆ.
ಮೃತ ಟ್ಯಾಂಕರ್ ಚಾಲಕ ಬಾಲಕೃಷ್ಣ ( 55 ) ಎಂದು ತಿಳಿದುಬಂದಿದೆ. ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.
ಡಿಕ್ಕಿಯ ರಭಸಕ್ಕೆ ಟ್ಯಾಂಕರ್ ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆ ನಡೆದ ಸಂದರ್ಭ ರಾಷ್ಟ್ರೀಯ ಹೆದ್ದಾರಿ ಸುಮಾರು 1 ಗಂಟೆಗಳ ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತು.
ಪ್ರಕರಣ ಭಟ್ಕಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.